ಸಿ.ಎಂ.ಇಬ್ರಾಹೀಂ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನಕ್ಕೆ ಆ.11ರಂದು ಉಪ ಚುನಾವಣೆ

Update: 2022-07-25 06:49 GMT

ಬೆಂಗಳೂರು, ಜು.25: ಸಿ.ಎಂ.ಇಬ್ರಾಹೀಂ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆ ನಡೆಸಲು ಸೋಮವಾರ ಅಧಿಸೂಚನೆ ಹೊರಡಿಸಲಾಗಿದೆ.

ಆಗಸ್ಟ್ 11ರಂದು ಚುನಾವಣೆಗೆ ದಿನ ನಿಗದಿಯಾಗಿದೆ. ಇಂದಿನಿಂದ (ಜು.25) ಆಗಸ್ಟ್ 1ರವರೆಗೆ ಚುನಾವಣಾಧಿಕಾರಿ ಕಚೇರಿ ಅಥವಾ ಸಹಾಯಕ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದು. ಆ.2ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಆ.4 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ.

ಆ.11ರಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಅಂದೇ ಸಂಜೆ 5ಕ್ಕೆ ಮತಗಳ ಎಣಿಕೆ ನಡೆಯಲಿದೆ ಎಂದು ಚುನಾವಣಾಧಿಕಾರಿಯಾಗಿರುವ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News