ಬೆಂಗಳೂರು | ಅನುಮಾನಾಸ್ಪದ ಚಟುವಟಿಕೆ ಆರೋಪ: ನಾಲ್ವರನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು
Update: 2022-07-25 07:20 GMT
ಬೆಂಗಳೂರು, ಜು.25: ಅನುಮಾನಾಸ್ಪದ ಚಟುವಟಿಕೆಯ ಆರೋಪದಲ್ಲಿ ರಾಜಧಾನಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ನಾಲ್ವರು ಯುವಕರನ್ನು ಸಿಸಿಬಿ ಪೊಲೀಸರು ರವಿವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.
ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಟಿಪಿ ಏರಿಯಾದ ಕಟ್ಟಡದ ಮೂರನೇ ಮಹಡಿಯಲ್ಲಿ ವಾಸವಿದ್ದ ಈ ನಾಲ್ವರ ಪೈಕಿ ಅಸ್ಸಾಂ ಮೂಲದ ಅಖ್ತರ್ ಹುಸೇನ್ ಎಂಬಾತನ ಚಟುವಟಿಕೆ ಬಗ್ಗೆ ಅನುಮಾನಗೊಂಡು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತನ ಜೊತೆಗೆ ಅದೇ ರೂಮ್ ನಲ್ಲಿ ವಾಸವಿದ್ದ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಇತರ ಮೂವರನ್ನೂ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.