'ನಿಮ್ಮಂತ ನಾಯಕರು ಲಕ್ಷ್ಮಣ ರೇಖೆಯನ್ನು ದಾಟಬಾರದು': ಶಾಸಕ ಝಮೀರ್ ಅಹ್ಮದ್ ಗೆ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ

Update: 2022-07-25 17:32 GMT

ಬೆಂಗಳೂರು: ಸಾರ್ವಜನಿಕ ಹೇಳಿಕೆ ನೀಡುವ ಮುನ್ನ ಎಚ್ಚರಿಕೆ ವಹಿಸಬೇಕು ಎಂದು ಚಾಮರಾಜಪೇಟೆ ಕ್ಷೇತ್ರದ ಶಾಸಕ ಝಮೀರ್ ಅಹ್ಮದ್ ಖಾನ್ ಗೆ  ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ ನೀಡಿದೆ.  

 ಝಮೀರ್ ಅಹ್ಮದ್ ಖಾನ್ ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಪತ್ರ ಬರೆದಿದ್ದು, ನಿಮ್ಮಂತವರಿಂದ ಭಾರತೀಯ ಕಾಂಗ್ರೆಸ್ ಪಕ್ಷ ಇಂತಹ ವರ್ತನೆ ನಿರೀಕ್ಷಿಸಿರಲಿಲ್ಲ. ಒಂದು ಪಕ್ಷದಲ್ಲಿ ಇದ್ದು ನಿಮ್ಮಂತ ನಾಯಕರು ಲಕ್ಷ್ಮಣ ರೇಖೆಯನ್ನು ದಾಟಬಾರದು. ಅನಾವಶ್ಯಕ ಹೇಳಿಕೆಯು ವಿವಾದ ಹಾಗೂ ಅಹಿತಕರ ವಾತಾವರಣ ಸೃಷ್ಟಿಸುತ್ತಿದೆ. ಅನಾವಶ್ಯಕ ಹೇಳಿಕೆಯು ತಪ್ಪು ಸಂದೇಶ ಹಾಗೂ ಅಭಿಪ್ರಾಯವನ್ನು ಸೃಷ್ಟಿಸಿದೆ. ಎಲ್ಲ ಜಾತಿ, ಜನಾಂಗ ಸಮೂಹವನ್ನು ಒಳಗೊಳ್ಳುವುದು ಕಾಂಗ್ರೆಸ್ ಪಕ್ಷ ಹುಟ್ಟಿನಿಂದ ನಡೆಸಿಕೊಂಡು ಬರುತ್ತಿದೆ ಎಂದು ಎಚ್ಚರಿಸಿದ್ದಾರೆ. 

'ಇನ್ನು ಮುಂದೆ ಸಾರ್ವಜನಿಕ ಹೇಳಿಕೆ ನೀಡುವ ಮುನ್ನ ಎಚ್ಚರಿಕೆ ವಹಿಸಿ. ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತುಪಾಲನೆ ಅತೀ ಮುಖ್ಯ. ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಎತ್ತಿಹಿಡಿಯಬೇಕು' ಎಂದು ಪತ್ರದಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News