ಹೈಕಮಾಂಡ್ ಎಚ್ಚರಿಕೆ ನೀಡಿರುವ ಕುರಿತು ಶಾಸಕ ಝಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ಏನು?

Update: 2022-07-26 07:43 GMT

ದಾವಣಗೆರೆ: ಸಾರ್ವಜನಿಕ ಹೇಳಿಕೆಗೆ ಸಂಬಂಧಿಸಿ ಹೈಕಮಾಂಡ್ ಎಚ್ಚರಿಕೆ ನೀಡಿರುವ ಕುರಿತು ಚಾಮರಾಜಪೇಟೆ  ಶಾಸಕ ಝಮೀರ್ ಅಹ್ಮದ್ ಖಾನ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನನಗೆ ಯಾವುದೇ ನೋಟಿಸ್ ಬಂದಿಲ್ಲ, ನಾನು ಈಗ ಪ್ರವಾಸದಲ್ಲಿದ್ದೇನೆ. ನನಗೆ ಯಾವುದೇ ನೋಟಿಸ್ ತಲುಪಿಲ್ಲ. ಅದು ನೋಟಿಸ್ ಅಲ್ಲ ಪತ್ರ ಅಂತ ಮಾಧ್ಯಮಗಳಿಂದ ತಿಳಿಯಿತು. ನಾನು ಇನ್ನೂ ಅದನ್ನು ಓದಿಲ್ಲ' ಎಂದಿದ್ದಾರೆ.

'ಡಿ.ಕೆ ಶಿವಕುಮರ್ ಅವರು ದೊಡ್ಡವರು, ಅವರು ನಮ್ಮ ಪಕ್ಷದ ಅಧ್ಯಕ್ಷರು. ಅವರು ನನ್ನ ಹೇಳಿಕೆಗಳಿಗೆ ಪ್ರತಿಕ್ರಿಯೆ ಕೊಡಬೇಕೆಂದೇನಿಲ್ಲ' ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.  

'ಇನ್ನು ಮುಂದೆ ಸಾರ್ವಜನಿಕ ಹೇಳಿಕೆ ನೀಡುವ ಮುನ್ನ ಎಚ್ಚರಿಕೆ ವಹಿಸಿ. ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತುಪಾಲನೆ ಅತೀ ಮುಖ್ಯ. ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಎತ್ತಿಹಿಡಿಯಬೇಕು' ಎಂದು ಸೋಮವಾರ ಶಾಸಕ ಝಮೀರ್ ಅಹ್ಮದ್ ಅವರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಪತ್ರದ ಮೂಲಕ ಎಚ್ಚರಿಕೆ ನೀಡಿದ್ದಾರೆ.

 ಇದನ್ನೂ ಓದಿ...  'ನಿಮ್ಮಂತ ನಾಯಕರು ಲಕ್ಷ್ಮಣ ರೇಖೆಯನ್ನು ದಾಟಬಾರದು': ಶಾಸಕ ಝಮೀರ್ ಅಹ್ಮದ್ ಗೆ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News