ಬೆಳ್ಳಾರೆ: ಯುವಕನ ಹತ್ಯೆ ಹಿನ್ನೆಲೆ; ಕೆಲವು ಶಾಲೆಗಳಿಗೆ ರಜೆ

Update: 2022-07-27 03:41 GMT
ಸಾಂದರ್ಭಿಕ ಚಿತ್ರ

ಬೆಳ್ಳಾರೆ : ಬೆಳ್ಳಾರೆಯಲ್ಲಿ ನಿನ್ನೆ ರಾತ್ರಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯನನ್ನು ಹತ್ಯೆಗೈದಿದ್ದು, ಮುಂಜಾಗ್ರತ ಕ್ರಮವಾಗಿ  ಸೆಕ್ಷನ್ 144 ಜಾರಿಯಲ್ಲಿದೆ. ಕೆಲವು ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು,  ಕೆಲವು ಅಂಗಡಿಗಳು ಬಂದ್ ಆಗಿವೆ.

ಬೆಳ್ಳಾರೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಹಿದಾಯ ಪಬ್ಲಿಕ್ ಸ್ಕೂಲ್ ಬೆಳ್ಳಾರೆ, ದಾರುಲ್ ಹಿಕ್ಮ ಸ್ಕೂಲ್ ಬೆಳ್ಳಾರೆ, ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆ ಹಾಗು ಜ್ಞಾನ ದೀಪ ವಿದ್ಯಾಸಂಸ್ಥೆ ಬೆಳ್ಳಾರೆ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News