ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿ

Update: 2022-07-27 06:32 GMT

ಸುಳ್ಯ, ಜು.27: ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕುಗಳಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪುತ್ತೂರು ಉಪ ವಿಭಾಗಾಧಿಕಾರಿ ಗಿರೀಶ್ ನಂದನ್ ಎಂ. ಈ ಬಗ್ಗೆ ಆದೇಶ ಹೊರಡಿಸಿದ್ದು, ಪುತ್ತೂರು ಉಪವಿಭಾಗ ವ್ಯಾಪ್ತಿಯ  ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕುಗಳಲ್ಲಿ ಬುಧವಾರ(ಜು.27) ಬೆಳಗ್ಗೆ 6ರಿಂದ ಅನ್ವಯವಾಗುವಂತೆ ಜುಲೈ 28ರ ಮಧ್ಯರಾತ್ರಿಯವರೆಗೆ ಸೆಕ್ಷನ್ 144 ಜಾರಿಗೊಳಿಸಿ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News