ಪಿಎಸ್ಸೈ ನೇಮಕಾತಿ ಹಗರಣ: ಮುಂಬೈನಲ್ಲಿ ಆರೋಪಿ ಪಿಎಸ್ಸೈ ಬಂಧನ

Update: 2022-07-30 15:02 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.30: ಪಿಎಸ್ಸೈ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಮುಂಬೈನಲ್ಲಿ ಪಿಎಸ್ಸೈ ಓರ್ವನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣದಲ್ಲಿ ಮಧ್ಯವರ್ತಿಯಾಗಿ ಕೆಲಸ ನಿರ್ವಹಿಸಿದ್ದ ಆರೋಪದಡಿ ಕಾಮಾಕ್ಷಿಪಾಳ್ಯ ಠಾಣಾ ಪಿಎಸ್ಸೈ ಶರೀಫ್ ಕಲಿಮಠ್‍ನನ್ನ ಸಿಐಡಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ನೇಮಕಾತಿ ಅಕ್ರಮ ಪ್ರಕರಣ ಬೆಳಕಿಗೆ ಬಂದ ನಂತರ, ಈತ ತಲೆಮರೆಸಿಕೊಂಡಿದ್ದ. ಈ ಸಂಬಂಧ ತನಿಖೆ ಮುಂದುವರೆಸಿದ್ದ ಪೊಲೀಸರು, ಆರೋಪಿಯನ್ನು ಬಂಧಿಸಿ ನಗರದ ಒಂದನೆ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ ಆ.8ರವರೆಗೆ ಕಸ್ಟಡಿಗೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News