ಚೆನ್ನೈ: ಸಿದ್ದರಾಮಯ್ಯಗೆ 'ಡಾ.ಬಿ.ಆರ್. ಅಂಬೇಡ್ಕರ್ ಸುಡರ್' ಪ್ರಶಸ್ತಿ ಪ್ರದಾನ

Update: 2022-07-30 18:21 GMT

ಚೆನ್ನೈ, ಜು. 30: ತಮಿಳುನಾಡಿನ 'ವಿಡುದಲೈ ಚಿರುದೈಗಳ್ ಪಕ್ಷ' ಚೆನ್ನೈನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಪಕ್ಷದ ಮುಖ್ಯಸ್ಥ ಹಾಗೂ ಸಂಸದ ತೋಲ್ ತಿರುಮಾವಳವನ್ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ 'ಡಾ.ಬಿ.ಆರ್. ಅಂಬೇಡ್ಕರ್ ಸುಡರ್' ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಇಂದು (ಶನಿವಾರ) ಬೆಳಗ್ಗೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಅವರನ್ನು ವಿಸಿಕೆ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು  ಜೈಕಾರ ಹಾಕುವ ಮೂಲಕ ಸ್ವಾಗತಿಸಿದರು.

ಬಳಿಕ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರನ್ನು ಭೇಟಿ ಮಾಡಿ ಕೆಲ ಕಾಲ ಮಾತುಕತೆ ನಡೆಸಿದ ಸಿದ್ದರಾಮಯ್ಯ  ಸಂಜೆ ವಿಸಿಕೆ ಪಕ್ಷ ಆಯೋಜಿಸಿದ್ದ  ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.  

ಈ ಸಂದರ್ಭದಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಳಗಿರಿ, ಸಂಸದ ತೋಲ್ ತಿರುಮಾವಳವನ್ ಮತ್ತಿತರರು ಹಾಜರಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News