ಜಮ್ಮು-ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಉಗ್ರನ ಹತ್ಯೆ

Update: 2022-07-31 05:46 GMT
Photo:PTI

ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ರವಿವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ಎಲ್‌ಇಟಿ  ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಯೋತ್ಪಾದಕನನ್ನು ಬಾರಾಮುಲ್ಲಾದ ಪಟ್ಟಣ ನಿವಾಸಿ ಇರ್ಷಾದ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ.

ಶನಿವಾರ ಸಂಜೆ ಜಿಲ್ಲೆಯ ಬಿನ್ನರ್ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿತು ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News