ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯಡಿ ಪಡಿತರ ವಿತರಣೆ
Update: 2022-07-31 16:10 GMT
ಉಡುಪಿ : ಕೇಂದ್ರ ಸರ್ಕಾರದ ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯಡಿ ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಯಲ್ಲಿ ಬೇರೆ ರಾಜ್ಯದ ಪಡಿತರ ಚೀಟಿದಾರರು ಅವರ ಆಧಾರ್ ದೃಢೀಕೃತ ಬೆರಳಚ್ಚು ಬಯೋಮೆಟ್ರಿಕ್ ಅಥವಾ ಆಧಾರ್ ಆಧಾರಿತ ಒಟಿಪಿ ನೀಡಿ ಪಡಿತರ ಪಡೆಯಬಹುದು ಎಂದು ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.