ಋಷಿಕೇಶ ಪುನರ್ವಸತಿ ಕೇಂದ್ರದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪ

Update: 2022-07-31 17:27 GMT
ಸಾಂದರ್ಭಿಕ ಚಿತ್ರ

ಋಷಿಕೇಶ: ಉತ್ತರಾಖಂಡದ ಋಷಿಕೇಶದಲ್ಲಿರುವ ಪುನರ್ವಸತಿ ಕೇಂದ್ರದಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಬಾಲಕಿಯೊಬ್ಬಳು ಆರೋಪಿಸಿದ್ದಾಳೆ. ಬಾಲಕಿ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

ಸಂತ್ರಸ್ತೆ ಋಷಿಕೇಶದಲ್ಲಿ ಪುನರ್ವಸತಿ ಕೇಂದ್ರವನ್ನು ನಡೆಸುತ್ತಿರುವ ದಿಲ್ಲಿಯ ಹುಡುಗಿಯ ಮೂಲಕ ವ್ಯಕ್ತಿಯೋರ್ವನನ್ನು ಭೇಟಿಯಾಗಿದ್ದಾಳೆ ಎಂದು ಪೊಲೀಸ್‌ ಇಲಾಖೆ ಮೂಲಗಳು ತಿಳಿಸಿವೆ.

"ಕೆಲವು ದಿನಗಳ ನಂತರ, ಬಾಲಕಿಗೆ ನಿದ್ರಾಜನಕ ಬೆರೆಸಿದ ತಂಪು ಪಾನೀಯವನ್ನು ನೀಡಲಾಯಿತು ಬಳಿಕ ಇಬ್ಬರು ವ್ಯಕ್ತಿಗಳು ಅತ್ಯಾಚಾರವೆಸಗಿದ್ದಾರೆ. ಅವಳು ಮತ್ತೆ ಪ್ರಜ್ಞೆಗೆ ಬಂದಾಗ, ಆಕೆಗೆ ಅಶ್ಲೀಲ ವೀಡಿಯೊಗಳು ಮತ್ತು ಫೋಟೋಗಳನ್ನು ತೋರಿಸಿ ಬೆದರಿಕೆ ಹಾಕಲಾಯಿತು. ಬಳಿಕ ಹಲವಾರು ಬಾರಿ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿದೆ” ಎಂದು ಪೊಲೀಸರು ತಿಳಿಸಿರುವುದಾಗಿ indiatoday.in ವರದಿ ಮಾಡಿದೆ.

ಲೈಂಗಿಕ ಕಿರುಕುಳದಿಂದ ಬೇಸತ್ತ ಬಾಲಕಿ ಆರೋಪಿಗಳನ್ನು ಬಂಧಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗೆ ಪತ್ರ ಬರೆದಿದ್ದಾಳೆ.

ಕೊತ್ವಾಲಿ ಠಾಣಾಧಿಕಾರಿ ರವಿ ಸೈನಿ ಮಾತನಾಡಿ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿರುವುದಾಗಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News