ನೇಣು ಬಿಗಿದ ಸ್ಥಿತಿಯಲ್ಲಿ ಆಂಧ್ರದ ಮಾಜಿ ಸಿಎಂ ಎನ್‌ಟಿಆರ್‌ ಪುತ್ರಿ ಮೃತದೇಹ ಪತ್ತೆ

Update: 2022-08-01 12:11 GMT
Photo: Twitter

ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್‌ಟಿ ರಾಮರಾವ್ ಅವರ ನಾಲ್ಕನೇ ಪುತ್ರಿ ಕೆ ಉಮಾ ಮಹೇಶ್ವರಿ ಅವರು ಸೋಮವಾರ ಜುಬ್ಲಿ ಹಿಲ್ಸ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು telanganatoday.com ವರದಿ ಮಾಡಿದೆ.

ಉಮಾ ಮಹೇಶ್ವರಿ ಅವರು ಕೆಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರು ಮತ್ತು ಕಳೆದ ಕೆಲವು ತಿಂಗಳುಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಆಕೆ ಮಲಗುವ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಜುಬಿಲಿ ಹಿಲ್ಸ್ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಆರೋಗ್ಯ ಸಮಸ್ಯೆಯಿಂದ ಖಿನ್ನತೆಗೆ ಒಳಗಾಗಿ ಆಕೆ ತನ್ನ ಜೀವನವನ್ನು ಅಂತ್ಯಗೊಳಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News