ಕುಂದಾಪುರ: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ

Update: 2022-08-01 13:18 GMT

ಕುಂದಾಪುರ: ಮನೆಯಲ್ಲಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಎಸೆಸೆಲ್ಸಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾದ ಘಟನೆ ಕುಂಬಾಸಿ ಸಮೀಪದ ಕೊರವಡಿಯಲ್ಲಿ ಸೋಮವಾರ ನಡೆದಿದೆ.

ಕೋಟ ಪಡುಕರೆ ಪ್ರೌಢಶಾಲೆಯ 10ನೆ ತರಗತಿಯ ಅನನ್ಯ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.

ವಿದ್ಯಾರ್ಥಿನಿ ಶಾಲೆಗೆ ಹೊರಡುವ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೋಣೆಗೆ ತೆರಳಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದಾಳೆ. ಈ ವೇಳೆ ಪಕ್ಕದ ಮನೆಯವರು ಬೆಂಕಿಯನ್ನು ಕಂಡು ಮನೆ ಬಳಿ ಆಗಮಿಸಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಬಾಲಕಿಯನ್ನು ಚಿಕಿತ್ಸೆ ಸಲುವಾಗಿ ಮಣಿಪಾಲದ ಖಾಸಗಿ ಆಸ್ಪತ್ರೆ ಕೊಂಡೊಯ್ದರೂ ಕೂಡ ಸುಟ್ಟ ಗಂಭೀರ ಗಾಯದಿಂದಾಗಿ ಆಕೆ ಮೃತಪಟ್ಟಿದ್ದಾಳೆ ಎಂದು ದೂರಲಾಗಿದೆ.

ಬಾಲಕಿಯ ತಂದೆ, ತಾಯಿ ಬೆಂಗಳೂರಿನಲ್ಲಿ ನೆಲೆಸಿದ್ದು ಆಕೆ  ಅಜ್ಜಿ ಮತ್ತು  ಚಿಕ್ಕಮ್ಮನ ಜೊತೆ ವಾಸ್ತವ್ಯ ಇದ್ದಳು ಎನ್ನಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News