ಎಸ್ಕೆಎ‌ಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಇಕ್ಬಾಲ್ ಬಾಳಿಲ ಆಯ್ಕೆ

Update: 2022-08-01 17:39 GMT

ಸುಳ್ಯ: ಸಮಸ್ತ ಕೇರಳ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಕರ್ನಾಟಕ ರಾಜ್ಯ ಸಮಿತಿ 2022-23ನೇ ಸಾಲಿನ ರಾಜ್ಯ ಸಮಿತಿ ರಚನೆಯಾಗಿದ್ದು ಇದರ ಸಂಘಟನಾ ಕಾರ್ಯದರ್ಶಿಯಾಗಿ ಸುಳ್ಯ ತಾಲೂಕಿನ ಬಾಳಿಲ ನಿವಾಸಿ ಇಕ್ಬಾಲ್ ಬಾಳಿಲ ಆಯ್ಕೆ ಗೊಂಡಿರುತ್ತಾರೆ.

ಎಸ್ಕೆಎ‌ಸ್ಸೆಸ್ಸೆಫ್ ಸಂಘಟನೆಯ ನೂತನ ಪದಾಧಿಕಾರಿಗಳ ಸಭೆಯು ಇತ್ತೀಚೆಗೆ ಪುತ್ತೂರಿನಲ್ಲಿ ನಡೆದಿದ್ದು ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಪದಾಧಿಕಾರಿಗಳು ಆಗಮಿಸಿದ್ದು, ಸಮಿತಿಯ ಅಧಿಕೃತ ಘೋಷಣೆಯನ್ನು ಇಂದು  ಎಸ್ಕೆಎ‌ಸ್ಸೆಸ್ಸೆಫ್ ನಾಯಕರಾದ ಪಾಣಕ್ಕಾಡ್ ಸಯ್ಯದ್ ಅಬ್ಬಾಸಲಿ ಶಿಹಾಬ್ ತಂಙಳ್ ಘೋಷಣೆ ಮಾಡಿರುತ್ತಾರೆ. ಅದರಲ್ಲಿ ಸುಳ್ಯ ತಾಲೂಕಿನಿಂದ ಪ್ರತಿನಿಧಿಯಾಗಿ ಇಕ್ಬಾಲ್ ಬಾಳಿಲ ಆಯ್ಕೆ ಯಾಗಿರುತ್ತಾರೆ‌.

ಇವರು ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ನಿವಾಸಿಯಾಗಿದ್ದು ಉಡುಪಿ ಭಾಗದಲ್ಲಿ ಉದ್ಯಮಿಯಾಗಿರುತ್ತಾರೆ. ಸಂಘಟನಾ ಚತುರರು, ಸೌಹಾರ್ದ ವೇದಿಕೆ ಮೂಲಕ ಜನಪ್ರಿಯರಾದ ಇವರು ಹಲವಾರು ಶಾಲಾ ಕಾಲೇಜುಗಳಿಗೆ ಶೈಕ್ಷಣಿಕ ತರಬೇತಿಯನ್ನು ನೀಡುತ್ತಾ ಜನರ ಪ್ರೀತಿಗೆ ಪಾತ್ರರಾಗಿರುತ್ತಾರೆ ಅಲ್ಲದೆ ವಿವಿಧ ಸಂಘಟನೆಯ ಸಂಘ-ಸಂಸ್ಥೆಗಳಲ್ಲಿ ಸಾಮಾಜಿಕ ಸೇವೆಯಲ್ಲಿ, ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ.

ಇವರಿಗೆ ಎಸ್ಕೆಎ‌ಸ್ಸೆಸ್ಸೆಫ್ ನ ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಯನ್ನು ನೀಡಿ ಅಲಂಕರಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News