ಅಲ್-ಇಹ್ಸಾನ್ ಕಬಡ್ಡಿ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ
Update: 2022-08-02 13:10 GMT
ಕಾಪು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಲಯನ್ಸ್ಆಂಗ್ಲ ಮಾಧ್ಯಮ ಶಾಲೆ ಪಡುಬಿದ್ರಿ ಇದರ ಸಹಭಾಗಿತ್ವದಲ್ಲಿ ಜರುಗಿದ ಪಡುಬಿದ್ರಿ ಹೋಬಳಿ ಮಟ್ಟದ ಪ್ರಾಥಮಿಕ ವಿಭಾಗದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ ಅಧೀನದಲ್ಲಿರುವ ಮೂಳೂರು ಅಲ್-ಇಹ್ಸಾನ್ಅಕಾಡೆಮಿ ಶಾಲೆಯ ವಿದ್ಯಾರ್ಥಿ ಗಳು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳೊಂದಿಗೆ ಶಾಲಾ ಪ್ರಾಂಶುಪಾಲ ಕೆ.ಎಸ್.ಹಬೀಬು ರ್ರಹಿ ಮಾನ್, ಮುಖ್ಯೋಪಾಧ್ಯಾಯಿನಿ ಮಮತಾ ಪೂಜಾರಿ, ಸೈಯದ್ ಶಬಾನಾ, ದೈಹಿಕ ಶಿಕ್ಷಣ ಶಿಕ್ಷಕರಾದ ಬಶೀರ್ ಎಂ., ಸದ್ದಾಮ್ ಹುಸೇನ್, ಸುಮನಾ ಕಿಶೋರ್ ಹಾಜರಿದ್ದರು.