ಮೀನು ಹಿಡಿಯುತ್ತಿದ್ದ ವ್ಯಕ್ತಿ ನದಿಪಾಲು

Update: 2022-08-02 15:53 GMT

ಗಂಗೊಳ್ಳಿ, ಆ.2: ಬೈಂದೂರು ತಾಲೂಕು ಹಡವು ಗ್ರಾಮದ ಅತ್ತಿಕೋಣೆ ಸೌಪರ್ಣಿಕ ಹೊಳೆಯ ತೀರದಲ್ಲಿ ಬಲೆ ಹಾಕುತ್ತಿದ್ದ  ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ನದಿಗೆ  ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಬಗ್ಗೆ ವರದಿ ಯಾಗಿದೆ.

ಹಡವು ತೆಂಕಿನ ಮನೆ ನಿವಾಸಿ ನಾರಾಯಣ ದೇವಾಡಿಗ(55) ಎಂಬವರು  ಆ.1ರಂದು ಸಂಜೆ ವೇಳೆ ಮೀನು ಹಿಡಿಯಲು ನದಿಗೆ ಬಲೆ ಹಾಕುತ್ತಿದ್ದಾಗ ಕಾಲು ಜಾರಿ ಬಿದ್ದು, ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾದರು.

ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News