ಮೂಡುಬಿದಿರೆ | ಉರುಳಿಬಿದ್ದ ಖಾಸಗಿ ಬಸ್: ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರು

Update: 2022-08-03 03:49 GMT

ಮೂಡುಬಿದಿರೆ, ಆ.3: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದ ಘಟನೆ ಬನ್ನಡ್ಕದ ರಾಘವೇಂದ್ರ ಮಠದ  ಮುಂಭಾಗದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ

ಮಂಗಳೂರಿನಿಂದ ಕಾರ್ಕಳ ಕಡೆಗೆ  ಹೋಗುತಿದ್ದ ಖಾಸಗಿ ಬಸ್ ಬನ್ನಡ್ಕದ ರಾಘವೇಂದ್ರ ಮಠದ  ಮುಂಭಾಗಕ್ಕೆ ತಲುಪಿದಾಗ  ಚಾಲಕನ ನಿಯಂತ್ರಣ ತಪ್ಪಿ ಪಲ್ಪಿಯಾಗಿದೆ.

ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News