ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ಆಗಮಿಸುತ್ತಿರುವ ಜನಸ್ತೋಮ: ದಾವಣಗೆರೆ ರಾ.ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

Update: 2022-08-03 07:01 GMT

ದಾವಣಗೆರೆ, ಆ.3: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯರ 75ನೇ ಜನ್ಮದಿನದ ಅಮೃತ ಮಹೋತ್ಸವಕ್ಕೆ ದಾವಣಗೆರೆಗೆ ಅಭಿಮಾನಿಗಳು, ಕಾರ್ಯಕರ್ತರು ಆಗಮಿಸುತ್ತಿರುವುದರಿಂದ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. 

ಬೆಳಗ್ಗೆ 6 ಗಂಟೆ ವೇಳೆಗೆ ಕಾರ್ಯಕ್ರಮ ನಡೆಯಲಿರುವ ಜಾಗದಲ್ಲಿ ಸುಮಾರು ಲಕ್ಷಕ್ಕೂ ಜನರು ಸೇರಿದ್ದು, ಸದ್ಯ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸುತ್ತಿದ್ದಾರೆ. 

ರಾಜ್ಯದ ಮೂಲೆ ಮೂಲೆಗಳಿಂದಲೂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಆಗಮಿಸುತ್ತಿದ್ದು, ಮಾರ್ಗ ಮಧ್ಯೆ ವಾಹನ ದಟ್ಟಣೆಯಿಂದ​ 4-5 ಕಿ.ಮೀ.ನಿಂದಲೇ ಕಾರ್ಯಕರ್ತರು ನಡೆದು ಹೋಗುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News