ಹರ್ಯಾಣ: ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ ವೇಳೆ ನಾಲ್ವರ ಸಾವು

Update: 2022-08-03 14:39 GMT
ಸಾಂದರ್ಭಿಕ ಚಿತ್ರ (PTI)

ಬಹಾದುರಗಡ,ಆ.3: ಹರ್ಯಾಣದ ಬಹಾದುರಗಡ ನಗರದಲ್ಲಿ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದಾಗ ವಿಷಾನಿಲ ಸೇವನೆಯಿಂದ ನಾಲ್ವರು ಮೃತಪಟ್ಟಿದ್ದಾರೆ. ನಗರದ ರೋಹದ್ ಕೈಗಾರಿಕಾ ಪ್ರದೇಶದಲ್ಲಿರುವ ಎರೋಫ್ಲೆಕ್ಸ್ ಕಾರ್ಖಾನೆಯಲ್ಲಿ ಬುಧವಾರ ಈ ದುರಂತ ಸಂಭವಿಸಿದೆ.

ತೀವ್ರ ಅಸ್ವಸ್ಥಗೊಂಡಿರುವ ಇತರ ಇಬ್ಬರನ್ನು ಸ್ಥಳೀಯ ಜೀವನಜ್ಯೋತಿ ಆಸ್ಪತ್ರೆಯ ಐಸಿಯುನಲ್ಲಿ ದಾಖಲಿಸಲಾಗಿದೆ.

ಮೃತ ನಾಲ್ವರು ಉ.ಪ್ರದೇಶದ ನಿವಾಸಿಗಳಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News