ಆ.5ರವರೆಗೆ ದ.ಕ.ಜಿಲ್ಲೆಯಲ್ಲಿ ಮದ್ಯ ಮಾರಾಟ, ಸಾಗಾಟಕ್ಕೆ ನಿರ್ಬಂಧ: ಡಿಸಿ ಡಾ. ರಾಜೇಂದ್ರ
Update: 2022-08-03 15:59 GMT
ಮಂಗಳೂರು, ಆ.3: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದ.ಕ. ಜಿಲ್ಲೆಯಾದ್ಯಂತ ಆ.5ರ ಬೆಳಗ್ಗೆ 9ರವರೆಗೆ ಯಾವುದೇ ರೀತಿಯ ಮದ್ಯ ಮಾರಾಟ, ದಾಸ್ತಾನು ಹಾಗೂ ಸಾಗಾಣಿಕೆಯನ್ನು ನಿರ್ಬಂಧಿಸಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.