ತಲವಾರು ವದಂತಿ ಆರೋಪ: ತನಿಖೆಗೆ ಆಗ್ರಹ

Update: 2022-08-03 16:27 GMT

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಅಜ್ಜಿನಡ್ಕ ಮುಳ್ಳುಗುಡ್ಡೆ ಪ್ರದೇಶದಲ್ಲಿ ತಲವಾರು ದಾಳಿ ವದಂತಿಯನ್ನು ಬಿಜೆಪಿ ಕಾರ್ಯಕರ್ತ ಕಿಶೋರ್ ಉಚ್ಚಿಲ ಎಂಬಾತ ಹಬ್ಬಿಸಿ ಪರಿಸರದಲ್ಲಿ ಆತಂಕಕ್ಕೆ ಕಾರಣನಾಗಿದ್ದಾನೆ. ಈ ಬಗ್ಗೆ ತನಿಖೆ ನಡೆಸುವಂತೆ ಕೋಟೆಕಾರ್ ಪಟ್ಟಣ ಪಂಚಾಯತ್ ಸದಸ್ಯ ಅಹ್ಮದ್ ಅಜ್ಜಿನಡ್ಕ ಆಗ್ರಹಿಸಿದ್ದಾರೆ.

ಬುಧವಾರ ಬೆಳಗ್ಗೆ 8ಕ್ಕೆ ತನ್ನ ಮೇಲೆ ತಲವಾರು ದಾಳಿಗೆ ಯತ್ನ ನಡೆಸಲಾಗಿದೆ ಎಂದು ಸುಳ್ಳು ಸುದ್ದಿ ಎಬ್ಬಿಸುವ ಮೂಲಕ ಶಾಂತಿ ಕದಡಿಸುವ ರಾಜಕೀಯ ಷಡ್ಯಂತ್ರ ನಡೆಸಲಾಗಿದೆ. ಪೊಲೀಸರು ಸಕಾಲಕ್ಕೆ ಎಚ್ಚೆತ್ತು ವಾಸ್ತವಾಂಶವನ್ನು ಬಹಿರಂಗಪಡಿಸಿದ್ದಾರೆ. ಆದಾಗ್ಯೂ ಈ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News