ಮಹಾರಾಷ್ಟ್ರ ಸಂಪುಟ ವಿಸ್ತರಣೆ: ದಿಲ್ಲಿಗೆ ತೆರಳಿದ ಫಡ್ನವೀಸ್‌, ಅನಾರೋಗ್ಯದಿಂದ ಪ್ರವಾಸ ಮೊಟಕುಗೊಳಿಸಿದ ಏಕನಾಥ್‌ ಶಿಂಧೆ

Update: 2022-08-04 13:08 GMT

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (Devendra Fadnavis) ಅವರು ರಾಜ್ಯ ಸಚಿವ ಸಂಪುಟ ವಿಸ್ತರಣೆಯ ತಾತ್ಕಾಲಿಕ ಪಟ್ಟಿಯ ಕುರಿತು ಬಿಜೆಪಿ ನಾಯಕತ್ವದೊಂದಿಗೆ ಸಮಾಲೋಚಿಸಲು ದಿಲ್ಲಿಗೆ ತೆರಳಿದ್ದಾರೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಮತ್ತು ಫಡ್ನವಿಸ್ ಪ್ರಮಾಣವಚನ ಸ್ವೀಕರಿಸಿದ ಜೂನ್ 30 ರಿಂದ ಸಂಪುಟ ವಿಸ್ತರಣೆ ಬಾಕಿ ಇದೆ. ಹೈಕಮಾಂಡ್ ಅಂತಿಮಗೊಳಿಸಿದರೆ, ನಾಳೆ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

.ಮುಖ್ಯಮಂತ್ರಿಗಳು ಅತಿಯಾದ ಒತ್ತಡದಿಂದ ಬಳಲುತ್ತಿದ್ದು,ಈ ಹಿನ್ನೆಲೆಯಲ್ಲಿ ದಿಲ್ಲಿ ಪ್ರವಾಸದಿಂದ ಹಿಂದೆ ಸರಿದಿದ್ದಾರೆ ಹಾಗೂ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವೈದ್ಯರ ಶಿಫಾರಸಿನ ನಂತರ ಶಿಂಧೆ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ದ್ವಿಚಕ್ರ ವಾಹನ ಹಿಂಬದಿ ಸವಾರರ ನಿರ್ಬಂಧ ವಾಪಾಸ್: ಕಮಿಷನರ್ ಶಶಿಕುಮಾರ್

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News