ಯಾದಗಿರಿ | ಭೀಕರ ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಆರು ಮಂದಿ ಬಲಿ

Update: 2022-08-05 12:45 GMT
ಸಾಂದರ್ಭಿಕ ಚಿತ್ರ

ಯಾದಗಿರಿ(Yadgiri), ಆ.5:  ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತ(Accident) ದಲ್ಲಿ 5 ತಿಂಗಳ ಮಗು ಸಹಿತ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟ ಘಟನೆ ಗುರುಮಠಕಲ್ ತಾಲೂಕಿನ ಅರಕೇರಾ (ಕೆ) ಬಳಿ ಗುರುವಾರ ರಾತ್ರಿ ನಡೆದಿರುವುದು ವರದಿಯಾಗಿದೆ.

ಅಪಘಾತದಲ್ಲಿ ಮುಹಮ್ಮದ್ ವಾಜೀದ್ ಹುಸೈನ್(40), ಮುಹಮ್ಮದ್ ನಝರ್ ಹುಸೈನ್ (76), ನೂರ್ ಜಹಾನ್ ಬೇಗಂ (70), ಹೀನಾ ಬೇಗಂ (30), ಇಮ್ರಾನ್ (22), ಹುಮೈಝಾ (5 ತಿಂಗಳು) ಎಂಬವರು ಮೃತಪಟ್ಟವರಾಗಿದ್ದಾರೆ. ಬಾಲಕ ಮುಹಮ್ಮದ್ ಫಾಝಿಲ್ ಹುಸೈನ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಗ್ರಾಮದ ಹಟ್ಟಿಯ ಎಂ.ಜಿ. ರಸ್ತೆ ನಿವಾಸಿಗಳೆಂದು ತಿಳಿದುಬಂದಿದೆ.

ಇವರು ಕಾರಿನಲ್ಲಿ ತೆಲಂಗಾಣದ ಕೊಡಂಗಲ್ ಸಮೀಪದ ಚಿತ್ಲಾಪಲ್ಲೆ (kodangal chitlapalle)ಯ ಸೈಯದ್ ಹಝ್ರತ್ ಅಬ್ದುಲ್ಲಾ ಶಾ ದರ್ಗಾಕ್ಕೆ ಭೇಟಿ ಹಿಂದಿರುಗುತ್ತಿದ್ದ ವೇಳೆ  ಅರಕೇರಾ (ಕೆ) ಸಿದ್ಧಾರೂಢ ಮಠದ ಬಳಿ ಗುರುವಾರ ರಾತ್ರಿ ಈ ಭೀಕರ ಅಪಘಾತ ಸಂಭವಿಸಿದೆ. ಇವರು ಸಂಚರಿಸುತ್ತಿದ್ದ ಕಾರಿಗೆ ಪೈಪ್ ಗಳನ್ನು ಸಾಗಾಟ ಮಾಡುತ್ತಿದ್ದ ಗೂಡ್ಸ್ ಲಾರಿ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ, ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಘಟನೆ ಕುರಿತು ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ವಿಷಪೂರಿತ ಮದ್ಯ ಸೇವನೆ: ಆರು ಮಂದಿ ಸಾವು, ಹಲವರು ಅಸ್ವಸ್ಥ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News