ಪೆರ್ವಾಜೆ: ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಕಾರ್ಯಕ್ರಮ

Update: 2022-08-05 14:00 GMT

ಕಾರ್ಕಳ, ಆ.5: ಸಮುದಾಯ ಬಾನುಲಿ ಕಮ್ಯುನಿಟಿ ರೇಡಿಯೋ ಅಸೋಸಿ ಯೇಶನ್‌ನ ಸಹಯೋಗದಲ್ಲಿ ಕಾರ್ಕಳದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗಾಗಿ ಪೆರ್ವಾಜೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಆಶಾ ಮತ್ತು ಬಜಗೋಳಿ ಸ್ವಚ್ಛ ಬ್ರಿಗೇಡ್  ಕಾರ್ಯಕರ್ತೆ ಆರತಿ ಅಶೋಕ್ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು  ಕೋವಿಡ್ 19 ಮತ್ತು ಶಾಲಾರಂಭದ ಸವಾಲುಗಳನ್ನು ವಿದ್ಯಾರ್ಥಿಗಳು ಯಾವ ರೀತಿ ಎದುರಿಸಬೇಕು ಎಂಬ ವಿಷಯದ ಕುರಿತು ಮಾಹಿತಿ ನೀಡಿದರು.

ರೇಡಿಯೋ ಮಣಿಪಾಲದ ಸಹಾಯಕ ಪ್ರಾಧ್ಯಾಪಕಿ ಮತ್ತು ಸಂಯೋಜಕಿ ಡಾ.ರಶ್ಮಿ ಅಮ್ಮೆಂಬಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಮುಖ್ಯೋ ಪಾಧ್ಯಾಯಿನಿ ಲಕ್ಷ್ಮೀ ಹೆಗಡೆ, ನಿವೃತ್ತ ಶಾಲಾ ಶಿಕ್ಷಕಿ ಲಕ್ಷ್ಮೀ, ಸ್ವಚ್ಛ ಬ್ರಿಗೇಡ್ ಕಾರ್ಕಳದ ಸಕ್ರಿಯ ಸದಸ್ಯೆ ಸುನೀತ ಅಂಡಾರು ಉಪಸ್ಥಿತರಿದ್ದರು. ಶಾಲಾ ಸಿಬ್ಬಂದಿಗಳು ಸಹಕರಿಸಿದರು.      

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News