ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಪದಾಧಿಕಾರಿಗಳಿಗೆ ಸನ್ಮಾನ
Update: 2022-08-05 14:19 GMT
ಮಂಗಳೂರು, ಆ.5: ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ನೂತನವಾಗಿ ನೇಮಕಗೊಂಡ ಅಧ್ಯಕ್ಷ ಅಬ್ದಲ್ ನಾಸಿರ್ ಲಕ್ಕಿಸ್ಟಾರ್, ಉಪಾಧ್ಯಕ್ಷರಾದ ಫಕೀರಬ್ಬ ಮಂಗಳೂರು, ಜಮಾಲ್ ಮಂಗಳೂರು, ಸದಸ್ಯರಾದ ಅಶ್ರಫ್ ಕಿನಾರೆ, ಸೈದುದ್ದೀನ್, ಸಿರಾಜ್ ಅವರನ್ನು ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ನಗರದ ಬಂದರ್ ಮಸ್ಜಿದ್ ಝೀನತ್ ಭಕ್ಷ್ ಕೇಂದ್ರ ಜುಮಾ ಮಸೀದಿಯಲ್ಲಿ ಗುರುವಾರ ಸನ್ಮಾನಿಸಿದರು.
ಈ ಸಂದರ್ಭ ಮಸೀದಿಯ ಆಡಳಿತ ಸಮಿತಿಯ ಉಪಾಧ್ಯಕ್ಷ ಕೆ.ಅಶ್ರಫ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ, ಸದಸ್ಯರಾದ ಎಸ್.ಎಂ. ರಶೀದ್ ಹಾಜಿ, ಅಬ್ದುಲ್ ಸಮದ್ ಹಾಜಿ, ಅದ್ದುಹಾಜಿ, ಐ ಮೊಯ್ದಿನಬ್ಬ ಹಾಜಿ ಉಪಸ್ಥಿತರಿದ್ದರು.