ಕ್ಷಣಿಕ ಸುಖ ನೀಡುವ ದುಶ್ಚಟಗಳಿಗೆ ಬಲಿಯಾಗಬೇಡಿ: ಎಡಿಸಿ ಕರೆ

Update: 2022-08-05 16:37 GMT

ಉಡುಪಿ, ಆ.5: ದುಶ್ಚಟಗಳು  ಮನುಷ್ಯನಿಗೆ ತಾತ್ಕಾಲಿ ಸುಖ ನೀಡಿದರೂ, ನಂತರದಲ್ಲಿ  ಅವನ ಅಮೂಲ್ಯವಾದ ಸಮಯ, ಆರೋಗ್ಯ, ಗೌರವವನ್ನು ಹಾಳು ಮಾಡುವುದರ ಜೊತೆಗೆ ಆರ್ಥಿಕ ನಷ್ಟಕ್ಕೂ ಕಾರಣವಾಗುತ್ತದೆ. ಆದ್ದರಿಂದ ಯುವಜನರು ದುಶ್ಚಟಗಳಿಂದ ದೂರ ಇರುವುದು ಒಳ್ಳೆ ಯದು ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ. 

ಶುಕ್ರವಾರ ಮಣಿಪಾಲದ ಡಾ.ಟಿ.ಎಂ.ಎ ಪೈ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಡಾ.ಟಿ.ಎಂ.ಎ ಪೈ ಪಾಲಿಟೆಕ್ನಿಕ್‌ ಕಾಲೇಜು ಮಣಿಪಾಲ ಹಾಗೂ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಡಾ.ಮಹಾಂತೇಶ ಶಿವಯೋಗಿಗಳ ಜನ್ಮದಿನದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕ್ಷಣಿಕ ಸುಖಕ್ಕಾಗಿ ಜನರು ವ್ಯಸನಕ್ಕೆ ದಾಸರಾಗುವುದರೊಂದಿಗೆ, ದುಶ್ಚಟಗಳ ಚಕ್ರವ್ಯೆಹದಲ್ಲಿ ಸಿಲುಕಿದರೆ ಅದರಿಂದ  ಹೊರಬರುವುದು ಕಷ್ಠಸಾಧ್ಯ. ಯುವ ಜನರು ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳುವುದರೊಂದಿಗೆ ಉತ್ತಮ ಶಿಕ್ಷಣ ಹೊಂದಿ, ಭವಿಷ್ಯದಲ್ಲಿ ಸತ್ಪ್ರಜೆಗಳಾಗಿ ಸದೃಡ ಭಾರತ ನಿರ್ಮಾಣಕ್ಕೆ  ಮುಂದಾಗಬೇಕು ಎಂದವರು ಹೇಳಿದರು. 

ಸರಕಾರ, ಆರೋಗ್ಯವಂತ ಸಮಾಜ ಹೊಂದಬೇಕು ಎಂಬ ಆಶೋತ್ತರ ಗಳೊಂದಿಗೆ ಜನರಿಗೆ ಜಾಗೃತಿ ಮೂಡಿಸುವ ಕಾರ್ಯವನ್ನು  ಮಾಡುತ್ತಿದೆ. ಡಾ. ಮಹಾಂತೇಶ ಶಿವಯೋಗಿ ಸ್ವಾಮೀಜಿ ಯವರು  20-21ನೇ ಶತಮಾನದಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ತಮ್ಮ ಜೋಳಿಗೆಯಲ್ಲಿ ದುಶ್ಚಟಗಳ ಭಿಕ್ಷೆಯನ್ನು ಬೇಡಿ ಪರಿವರ್ತನೆಗೆ ಮುಂದಾಗಿದ್ದರ ಹಿನ್ನೆಲೆಯಲ್ಲಿ ಅವರ ಜನ್ಮದಿನಾಚರಣೆಯನ್ನು  ವ್ಯಸನ ಮುಕ್ತ ದಿನವನ್ನಾಗಿ ಆಚರಿಸುತ್ತಿದೆ ಎಂದರು.

ಖ್ಯಾತ ಮನೋವೈದ್ಯ ಡಾ. ಪಿ.. ಭಂಡಾರಿ ಮಾತನಾಡಿ, ಸಾಮಾನ್ಯವಾಗಿ ವಿದ್ಯಾರ್ಥಿ ಜೀವನದಲ್ಲಿ ಯುವಜನರು ತಮ್ಮ ಸ್ನೇಹಿತರ ಸಹವಾಸ ಹಾಗೂ ಪ್ರಚೋದನೆಯಿಂದ ಕೆಟ್ಟ ಚಟಗಳನ್ನು ಕಲಿಯುತ್ತಾರೆ. ಇಂತಹ ಹವ್ಯಾಸಗಳಿಂದ  ಆರೋಗ್ಯದ  ಮೇಲೆ ದುಷ್ಪರಿಣಾಮ ಉಂಟಾಗಿ, ವಿದ್ಯಾರ್ಥಿಗಳ  ಓದು ಕುಂಠಿತಗೊಳ್ಳುವ ಜೊತೆಗೆ ಅವರ  ಭವಿಷ್ಯವನ್ನು ಕತ್ತಲೆಗೆ ತಳ್ಳುತ್ತದೆ. ಇಂತಹ ವ್ಯಸನಗಳಿಗೆ ಯುವಜನತೆ ಬಲಿಯಾಗದೇ ದೂರವಿರಬೇಕು ಎಂದರು. 

ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿ, ಡಾ.ಮಹಾಂತೇಶ ಶಿವಯೋಗಿಗಳ ಹಿನ್ನೆಲೆ ಹಾಗೂ ಸಮಾಜದಲ್ಲಿ ಅವರು ಜಾರಿಗೆ ತಂದ ಸುಧಾರಣೆ ಮತ್ತು ಅವರಿಗಿದ್ದ ಸಾಮಾಜಿಕ ಕಳಕಳಿಯ ಬಗ್ಗೆ ತಿಳಿಸಿದರು.

ಕಾಲೇಜಿನ ಉಪಪ್ರಾಂಶುಪಾಲ ಡೇರಿಕ್ ಮಸ್ಕರೇನಸ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋಧಿಸಿ, ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಮುಖ್ಯ ಪ್ರಾಂಶುಪಾಲ ನರೇಂದ್ರ ಪೈ, ಕಾಲೇಜಿನ ಶೈಕ್ಷಣಿಕ ಸಂಯೋಜಕ ಟಿ.ರಂಗ ಪೈ, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿ ದ್ದರು. ವಿದ್ಯಾರ್ಥಿನಿ ಪ್ರಿಯಾಂಕ ನಿರೂಪಿಸಿ, ಸತ್ಯವ್ರತಾ ವಂದಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News