ಸಿಎಂ ಬೊಮ್ಮಾಯಿಗೆ ಕೋವಿಡ್​ ದೃಢ: ದೆಹಲಿ ಪ್ರವಾಸ ರದ್ದು

Update: 2022-08-06 04:46 GMT

ಬೆಂಗಳೂರು, ಆ.6: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ ​ ಸೋಂಕು ದೃಢವಾಗಿದ್ದು, ಅವರ ದೆಹಲಿಯ ಪ್ರವಾಸ ರದ್ದು ಮಾಡಲಾಗಿದೆ. 

ಈ ಬಗ್ಗೆ ಟ್ವೀಟ್​ ಮಾಡಿ ಸಿಎಂ ಬೊಮ್ಮಾಯಿ ಮಾಹಿತಿ ಹಂಚಿಕೊಂಡಿದ್ದಾರೆ.

''ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ'' ಎಂದು ತಿಳಿಸಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News