ಬೆಂಗಳೂರು: ಅಪಾರ್ಟ್‍ಮೆಂಟ್‍ನಲ್ಲಿ ಮಹಿಳೆ ಅನುಮಾನಸ್ಪದ ಸಾವು

Update: 2022-08-06 17:04 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.6: ಮಹಿಳೆಯೊಬ್ಬರು ಅಪಾರ್ಟ್‍ಮೆಂಟ್‍ನಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಬಂಧ ವರದಿ ಮಾಡಲು ತೆರಳಿದ್ದ ವರದಿಗಾರನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ದಾಸನಪುರ ಎಪಿಎಂಸಿ ಬಳಿಯ ಅಪಾರ್ಟ್‍ಮೆಂಟ್‍ ಒಂದರಲ್ಲಿ ವಾಸವಿದ್ದ ಶ್ವೇತಾ(32) ಎಂಬಾಕೆ ಮೃತ ಮಹಿಳೆ ಎಂದು ಪೊಲೀಸರು ಗುರುತಿಸಿದ್ದಾರೆ.

ಉದ್ಯೋಗದ ವಿಚಾರದಲ್ಲಿ ಖಿನ್ನತೆಗೊಳಗಾಗಿ ಜಿಗುಪ್ಸೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ಶ್ವೇತಾ ಸಂಬಂಧಿ ಮೇಘಾ ಎಂಬುವವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪತಿ ಜೊತೆ 6 ವರ್ಷದ ಹಿಂದೆ ಶ್ವೇತಾ ಮದುವೆಯಾಗಿದ್ದರು. ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. 

ಮತ್ತೊಂದೆಡೆ ಸಾವಿನ ಕುರಿತು ಸುದ್ದಿಗಾಗಿ ತೆರಳಿದ್ದ ಖಾಸಗಿ ಸುದ್ದಿ ವಾಹಿನಿಯ ವರದಿಗಾರನ ಮೇಲೆ ಮೃತಳ ಸೋದರಮಾವ ನಾರಾಯಣ ಎಂಬಾತ ವರದಿಗಾರನ ಮೇಲೆ ಹಲ್ಲೆ ನಡೆಸಿ ಸುದ್ದಿ ಮಾಡದಂತೆ ಬೆದರಿಕೆವೊಡ್ಡಿದ್ದಾರೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News