ಮಂಗಳೂರು | ಆ.8ರವರೆಗೆ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚನೆ

Update: 2022-08-07 08:47 GMT
ಸಾಂದರ್ಭಿಕ ಚಿತ್ರ

ಮಂಗಳೂರು, ಆ.7: ಕರಾವಳಿಯಲ್ಲಿ ಮಳೆ ಮುಂದುವರಿದಿರುವಂತೆಯೇ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಳ್ಳುವ ಸಾಧ್ಯತೆ ಇರುವುದರಿಂದ ಆ.8ರವರೆಗೆ ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಮೀನುಗಾರಿಕೆ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಕೋಸ್ಟ್ ಗಾರ್ಡ್, ಮಂಗಳೂರು ನೀಡಿರುವ ಹವಾಮಾನ ಮನ್ಸೂಚನೆ ಹಿನ್ನೆಲೆಯಲ್ಲಿ ಈ ಮುನ್ನೆಚ್ಚರಿಕೆ ನೀಡಿರುವುದಾಗಿ ತಿಳಿಸಿರುವ ಮೀನುಗಾರಿಕೆ ಜಂಟಿ ನಿರ್ದೇಶಕರು, ಈಗಾಗಲೇ ಸಮುದ್ರಕ್ಕೆ ಮೀನುಗಾರಿಕೆ ತೆರಳಿರುವ ಎಲ್ಲಾ ಮೀನುಗಾರಿಕಾ ದೋಣಿಗಳು ಕೂಡಲೇ ದಡಕ್ಕೆ ವಾಪಸ್ ಆಗುವಂತೆ ಪ್ರಕಟನೆಯಲ್ಲಿ ಪ್ರಕಟನೆಯಲ್ಲಿ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News