​ಅಂದರ್ ಬಾಹರ್: 13 ಮಂದಿ ಸೆರೆ

Update: 2022-08-07 15:09 GMT

ಕುಂದಾಪುರ, ಆ.7: ವಡೇರಹೋಬಳಿ ಗ್ರಾಮದ ಶಾಸ್ತ್ರೀ ಪಾರ್ಕ್ ಬಳಿಯ ಇಂದಿರಾ ಕ್ಯಾಂಟೀನ್ ಹಿಂಬದಿ ಆ.6ರಂದು ಮಧ್ಯಾಹ್ನ ವೇಳೆ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ ಅಭಿಜೀತ್, ಸುಕೇಶ ಕೆ, ವಿಲಾಸ್ ಆಚಾರ್ಯ, ಶಶಾಂಕ ಶೆಟ್ಟಿ, ಸನತ್ ಕುಮಾರ ಶೆಟ್ಟಿ, ಸಚಿನ್ ಎಂಬವರನ್ನು ಕುಂದಾಪುರ ಪೊಲೀಸರು ಬಂಧಿಸಿ, 5050ರೂ. ನಗದು ವಶಪಡಿಸಿಕೊಂಡಿದ್ದಾರೆ.

ಅದೇ ರೀತಿ ವಡೇರಹೋಬಳಿ ಗ್ರಾಮದ ಟಿ.ಟಿ.ರೋಡ್ ಎಂಬಲ್ಲಿ ನೀರಿನ ಟ್ಯಾಂಕ್ ಬಳಿ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ ವಿಶ್ವನಾಥ, ಗಣೇಶ ದೇವಾಡಿಗ, ರತ್ನಾಕರ, ಬೀರಪ್ಪ ಗೌಡರ್, ದೇವ, ಮಂಜುನಾಥ, ಶ್ರೀಕಾಂತ ಗೌಡರ್ ಎಂಬವರನ್ನು ಪೊಲೀಸರು ಬಂಧಿಸಿ, 5950ರೂ. ನಗದು ವಶಪಡಿಸಿ ಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News