ರಾಜಸ್ಥಾನದ ಶ್ಯಾಮ್ ದೇವಸ್ಥಾನದಲ್ಲಿ ಕಾಲ್ತುಳಿತ: 3 ಮಂದಿ ಸಾವು, ಇಬ್ಬರಿಗೆ ಗಾಯ

Update: 2022-08-08 04:53 GMT
Photo:PTI

ಹೊಸದಿಲ್ಲಿ: ರಾಜಸ್ಥಾನದ ಸಿಕಾರ್‌ನಲ್ಲಿರುವ ಖತು ಶ್ಯಾಮ್‌ ಜಿ ದೇವಸ್ಥಾನದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು NDTV ವರದಿ ಮಾಡಿದೆ.

ಗಾಯಗೊಂಡ ಇಬ್ಬರನ್ನು ಚಿಕಿತ್ಸೆಗಾಗಿ ಜೈಪುರದ ಆಸ್ಪತ್ರೆಗೆ ರವಾನಿಸಲಾಗಿದೆ.

ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ.

ಇಂದು ಭಗವಾನ್ ಕೃಷ್ಣನ ಅವತಾರವೆಂದು ನಂಬಲಾದ ಖತು ಶ್ಯಾಮ್ ಜಿಯ ದರ್ಶನಕ್ಕೆ ಮಂಗಳಕರವೆಂದು ಪರಿಗಣಿಸಲಾಗಿದೆ.

ಪೊಲೀಸರ ಪ್ರಕಾರ, ದೇವಾಲಯದ ಹೊರಗೆ ದೊಡ್ಡ ಜನಸಮೂಹ ಜಮಾಯಿಸಿದ್ದು ಗೇಟ್ ತೆರೆಯುವುದನ್ನೇ ಕಾಯುತ್ತಿದ್ದರು. ಗೇಟ್‌ಗಳು ತೆರೆಯುತ್ತಿದ್ದಂತೆ ಜನರು ನೂಕುನುಗ್ಗಲು ನಡೆಸಿದ ತಕ್ಷಣ ಮಹಿಳೆಯೊಬ್ಬರು ಪ್ರಜ್ಞೆ ತಪ್ಪಿ ಬಿದ್ದಿದ್ದು, ಆಕೆಯ ಹಿಂದೆ ಇದ್ದವರು ಕೂಡ ಬಿದ್ದಿದ್ದಾರೆ ಎಂದು ವರದಿಯಾಗಿದೆ. ಈ ವೇಳೆ ಮೂವರು ಮಹಿಳೆಯರು ಪ್ರಾಣ ಕಳೆದುಕೊಂಡರು ಮತ್ತು ಇಬ್ಬರು ಗಾಯಗೊಂಡರು.

ಕೂಡಲೇ ದೇವಸ್ಥಾನಕ್ಕೆ ಧಾವಿಸಿದ ಪೊಲೀಸ್ ಸಿಬ್ಬಂದಿ ಗುಂಪನ್ನು ನಿಯಂತ್ರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News