ಕುಂದಾಪುರ; ವಿದ್ಯುತ್ ತಂತಿ ತಗುಲಿ ನಾಲ್ಕು ಜಾನುವಾರುಗಳ ಸಾವು: ಮೆಸ್ಕಾಂ ವಿರುದ್ಧ ಸ್ಥಳೀಯರ ಆಕ್ರೋಶ

Update: 2022-08-08 06:19 GMT

ಕುಂದಾಪುರ: ತುಂಡಾಗಿ ಬಿದ್ದ ವಿದ್ಯುತ್‌ ತಂತಿ ತಗುಲಿದ ಪರಿಣಾಮ ಗದ್ದೆಯಲ್ಲಿ ಮೇಯುತ್ತಿದ್ದ ನಾಲ್ಕು ಜಾನುವಾರುಗಳು ಸಾವನ್ನಪ್ಪಿರುವ ಘಟನೆ ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರ್ಕೂರಿನಲ್ಲಿ ನಡೆದಿದೆ.

ಪಶು ವೈದ್ಯಾಧಿಕಾರಿಗಳು ಹಾಗೂ ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿದ್ಯುತ್‌ ತಂತಿಗಳು ತೀರಾ ಹಳೆಯದಾಗಿದ್ದು, ತುಂಡಾಗಿ ಬಿದ್ದ ಪರಿಣಾಮ ಇದನ್ನು ಸ್ಪರ್ಷಿಸಿದ ಹಸುಗಳು ಸಾವನ್ನಪ್ಪಿರಬಹುದು ಎಂದು ಗ್ರಾಮಸ್ಥರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಹಳೆಯ ವಿದ್ಯುತ್ ತಂತಿಗಳನ್ನು ಬದಲಾಯಿಸಬೇಕೆಂದು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News