ಆ.9, 14ರಂದು ಅಂಚೆ ಕಚೇರಿಗಳಲ್ಲಿ ರಾಷ್ಟ್ರಧ್ವಜ ಖರೀದಿಗೆ ಮಾತ್ರ ಅವಕಾಶ

Update: 2022-08-08 15:06 GMT

ಉಡುಪಿ, ಆ.8: ಅಂಚೆ ಇಲಾಖೆಯ ವತಿಯಿಂದ ಹರ್-ಘರ್ ತಿರಂಗಾ ಅಭಿಯಾನದ ಪ್ರಯುಕ್ತ ಸಾರ್ವಜನಿಕರಿಗೆ ರಾಷ್ಟ್ರೀಯ ಧ್ವಜವನ್ನು ಖರೀದಿಸಲು ಅನುಕೂಲವಾಗುವಂತೆ ಆಗಸ್ಟ್ 9 ಹಾಗೂ 14 ರಂದು ಉಡುಪಿ ವಿಭಾಗದ ಎಲ್ಲಾ ಇಲಾಖಾ ಅಂಚೆ ಕಚೇರಿಗಳು ಕಾರ್ಯ ನಿರ್ವಹಿಸಲಿದ್ದು, ಈ ಎರಡೂ ದಿನಗಳಲ್ಲಿ ತಿರಂಗಾ ವಿತರಣೆ ಮಾತ್ರ ನಡೆಯಲಿದ್ದು, ಬೇರೆ ಯಾವುದೇ ವ್ಯವಹಾರಗಳು ಇರುವುದಿಲ್ಲ.

ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News