ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು: ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಪುತ್ರ

Update: 2022-08-08 15:21 GMT

ಮೈಸೂರು,ಆ.8: ನನ್ನ ತಂದೆಯದ್ದು ಬಿಜಪಿ ಪಕ್ಷ, ನನ್ನದು ಕಾಂಗ್ರೆಸ್ ಪಕ್ಷ ಹಾಗಾಗಿ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕು ಎಂದು ಬಯಸುತ್ತೇನೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರ ಪುತ್ರ ಪೂರ್ವಜ್ ಹೇಳಿದ್ದಾರೆ.

ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ''ನಾನು ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇನೆ.  ನಾನು ಎಂದೂ ಕಾಂಗ್ರೆಸ್ ಪಕ್ಷ ಬಿಟ್ಟಿಲ್ಲ. ನಾನು ಬಿಜೆಪಿ ಕಾರ್ಯಕ್ರಮದಲ್ಲಿ ಯಾವತ್ತೂ ಭಾಗಿಯಾಗಿಲ್ಲ. ನಾನು ತಂದೆಯವರ ಚುನಾವಣೆ ವೇಳೆ ಮಾತ್ರ ಎರಡು ಬಾರಿ ಪ್ರಚಾರ ಮಾಡಿದ್ದೆ ಅಷ್ಟೇ'' ಎಂದು ಹೇಳಿದರು.

'ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು, ನನ್ನ ತಂದೆಯದ್ದು ಬಿಜೆಪಿ ಪಕ್ಷ, ಆದ್ರೆ ನನ್ನದಲ್ಲ. ನಾನು ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೀನಿ, ಇರ್ತೀನಿ. ನನ್ನ ತಂದೆ ಎಂದಿಗೂ ನನಗೆ ಷರತ್ತು ವಿಧಿಸಿಲ್ಲ. ನಾನು ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಹೋಗ್ತೀನಿ ಎಂದಿದ್ದಕ್ಕೆ ಹೋಗು ಎಂದಿದ್ದರು. ನಾನು ಸಿದ್ದರಾಮಯ್ಯನವರಿಗೆ ಕಾಲ್ ಮಾಡಿಕೊಂಡೆ ಬಂದಿರುವೆ'' ಎಂದು ಎಚ್.ವಿಶ್ವನಾಥ್ ಪುತ್ರ ಪೂರ್ವಜ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News