ಮುಂಬೈ: ವೈಮಾನಿಕ ಕಾರ್ಮಿಕ ಸಂಘದ ಕಚೇರಿಯಲ್ಲಿ ವ್ಯಕ್ತಿಯ ಥಳಿಸಿ ಹತ್ಯೆ

Update: 2022-08-09 02:52 GMT

ಮುಂಬೈ: ಇಲ್ಲಿನ ಸಾಂತಾಕ್ರೂಜ್‍ನಲ್ಲಿರುವ ವೈಮಾನಿಕ ಕಾರ್ಮಿಕ ಸಂಘದ ಕಚೇರಿಯಲ್ಲಿ ನಡೆಯುತ್ತಿದ್ದ ಪಾರ್ಟಿ ವೇಳೆ ವ್ಯಕ್ತಿಯೊಬ್ಬನನ್ನು ಥಳಿಸಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಅಬ್ದುಲ್ ಶೇಖ್ (50) ಹಾಗೂ ಇತರರು ಭಾರತ ವಿಮಾನ ನಿಲ್ದಾಣದ ಪ್ರಾಧಿಕಾರ ವ್ಯಾಪ್ತಿಯಲ್ಲಿರುವ ಕಾರ್ಮಿಕ ಸಂಘದ ಕಚೇರಿಯಲ್ಲಿ ರವಿವಾರ ತಡರಾತ್ರಿ ಮದ್ಯಪಾನ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಶೇಖ್ ಭಾರತ ವಿಮಾನ ನಿಲ್ದಾಣ ಪ್ರಾಧಿಕಾರದ ಉದ್ಯೋಗಿಯಾಗಿದ್ದು, ನಿಖಿಲ್ ಶರ್ಮಾ  ಅಲಿಯಾಸ್ ಕಪಾಲಿ (30) ಎಂಬ ವ್ಯಕ್ತಿ ಶೇಖ್ ಅವರನ್ನು ಥಳಿಸಿ ಹತ್ಯೆ ಮಾಡಿದ್ದಾರೆ ಎಂದು ಆಪಾದಿಸಲಾಗಿದೆ. ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ ಎಂದು ವಿವರ ನೀಡಿದ್ದಾರೆ.

ಶರ್ಮಾ ಶಾಮೀಲಾಗಿದ್ದ ಸಂಘರ್ಷದಲ್ಲಿ ಮಧ್ಯಪ್ರವೇಶಿಸಿದ ಶೇಖ್ ಅವರನ್ನು ಹತ್ಯೆ ಮಾಡಲಾಗಿದೆ ಎಂದು ದೂರು ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News