ಗುಂಡ್ಲುಪೇಟೆ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಮೃತ್ಯು

Update: 2022-08-09 04:55 GMT

ಚಾಮರಾಜನಗರ, ಆ.9: ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದು ಯುವಕನೋರ್ವ ಮೃತಪಟ್ಟ ಘಟನೆ ಗುಂಡ್ಲುಪೇಟೆ(Gundlupete) ತಾಲೂಕಿನ ನಾಗಪಟ್ಟಣ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.

ನಾಗಪಟ್ಟಣದ ನಿವಾಸಿ ರಾಜು(ಪಟೇಲ) (28) ಮೃತಪಟ್ಟ ಯುವಕ. ಜಮೀನಿಗೆ ತೆರಳಿದ್ದ ಇವರು ಅಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ಆಕಸ್ಮಿಕವಾಗಿ ತುಳಿದಿದ್ದು, ವಿದ್ಯುತ್ ಆಘಾತಕ್ಕೊಳಗಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

 ಇದನ್ನೂ ಓದಿ: ಶೃಂಗೇರಿಯಲ್ಲಿ ಮುಂದುವರಿದ ಮಳೆ: ರಾಜ್ಯ ಹೆದ್ದಾರಿ ಕುಸಿತ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News