ಚಿಕ್ಕಮಗಳೂರು | ಹಳ್ಳಕ್ಕೆ ಬಿದ್ದು ಕೊಚ್ಚಿಕೊಂಡು ಹೋದ ಕಾರು: ಓರ್ವ ಮೃತ್ಯು

Update: 2022-08-09 08:52 GMT

ಚಿಕ್ಕಮಗಳೂರು, ಆ.9: ಭಾರೀ ಮಳೆಯಿಂದ ತತ್ತರಿಸಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾರೊಂದು ಹಳ್ಳಕ್ಕೆ ಬಿದ್ದು ಕೊಚ್ಚಿಕೊಂಡು ಹೋದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತರನ್ನು ಅರಿಶಿಣಗೆರೆ ನಿವಾಸಿ ಪ್ರಸನ್ನ(51) ಎಂದು ಗುರುತಿಸಲಾಗಿದೆ. ಎನ್.ಆರ್.ಪುರ ತಾಲೂಕಿನ ಸಾತ್ಕೊಳ ಎಂಬಲ್ಲಿ ಈ ಘಟನೆ ನಡೆದಿದೆ.

ಪ್ರಸನ್ನ ಸಂಬಂಧಿಕರ ಮನೆಗೆ ಶ್ರಾವಣಕ್ಕೆಂದು ಕಾರಿನಲ್ಲಿ ಹೊರಟಿದ್ದರು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದು ನೀರಲ್ಲಿ ಕೊಚ್ಚಿಕೊಂಡು ಹೋಗಿದೆ. ಅದರೊಳಗೆ ಸಿಲುಕಿದ ಪ್ರಸನ್ನ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಫಾಝಿಲ್ ಕೊಲೆ ಆರೋಪಿಗಳಿಗೆ ಠಾಣೆಯಲ್ಲಿ ರಾಜಾತಿಥ್ಯ ನೀಡಿಲ್ಲ: ಎನ್. ಶಶಿಕುಮಾರ್

ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲೂ ಇದೇರೀತಿ ಕಾರೊಂದು ನೆರೆ ನೀರಿನಲ್ಲಿ ಕೊಚ್ಚಿಕೊಂಡ ಹೋದ ಘಟನೆ ನಡೆದಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು ಕಾರಿನ ಗಾಜನ್ನು ಒಡೆದು ಅದರೊಳಗಿದ್ದ ಇಬ್ಬರ ಪ್ರಾಣ ಉಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News