ಮಂಗಳೂರು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಸಂಸ್ಥಾಪನ ದಿನಾಚರಣೆ

Update: 2022-08-09 13:17 GMT

ಮಂಗಳೂರು, ಆ.9: ಮಂಗಳೂರು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ 62ನೇ ಯುವ ಕಾಂಗ್ರೆಸ್ ಸಂಸ್ಥಾಪನ ದಿನವನ್ನು ಜೆಪ್ಪುಭಾರತ್ ಮೈದಾನವನ್ನು ಸ್ವಚ್ಛಗೊಳಿಸುವ ಮೂಲಕ ಆಚರಿಸಲಾಯಿತು.

ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಟಿ.ಕೆ. ಸುಧೀರ್ ಮಾತನಾಡಿ ಕಾಂಗ್ರೆಸ್ ಪಕ್ಷ ಯುವಕರಿಗೆ ಸಾಕಷ್ಟು ಯೋಜನೆಗಳನ್ನು ನೀಡಿದೆ. ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ತಮ್ಮ ಅಧಿಕಾರ ಅವಧಿಯಲ್ಲಿ ಮತದಾನದ ಹಕ್ಕನ್ನು 18 ವರ್ಷಕ್ಕೆ ಇಳಿಸಿ ಯುವಕರು ರಾಜಕೀಯ ಪ್ರವೇಶಕ್ಕೆ ಅವಕಾಶ ಕಲ್ಪಿಸಿದರು. ಪ್ರಸ್ತುತ ಬಿಜೆಪಿ ಸರಕಾರದ ಆಡಳಿತ ವೈಫಲ್ಯವನ್ನು ಜನರಿಗೆ ಮುಟ್ಟಿಸುವಂತಹ ಕೆಲಸವನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕು ಎಂದರು.

ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸವಾನ್ ಎಸ್.ಕೆ. ಕಾರ್ಯಕ್ರಮ ಆಯೋಜಿಸಿದ್ದರು. ಮಾಜಿ ಕಾರ್ಪೊರೇಟರ್ ಮಾಜಿ ಸದಸ್ಯೆ ಸಬಿತಾ ಮಿಸ್ಕಿತ್, ಸದಾಶಿವ ಅಮೀನ್ ಕಾಂಗ್ರೆಸ್‌ನಲ್ಲಿ ಯುವಕರ ಪಾತ್ರವನ್ನು ಕೊಂಡಾಡಿದರು.

ಈ ಸಂದರ್ಭ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಮಾನಂದ ಪೂಜಾರಿ, ಉಪಾಧ್ಯಕ್ಷ ಬೆಳ್ಳಿಪಾಡಿ ಅಭಿಷೇಕ್, ಹೊನ್ನಯ್ಯ, ವಿದ್ಯಾ, ಪ್ರವೀತ್ ಕರ್ಕೇರ, ಉದಯ ಕುಂದರ್, ಸಮರ್ಥ್ ಭಟ್, ಗೌತಮ್ ಬೋಳಾರ್, ಜ್ಯೋತಿ, ಹೈದರ್ ಆಲಿ, ಸಾದ್ ಎಸ್. ಕೆ., ಕೀರ್ತಿ ಬಾಬುಗುಡ್ಡೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News