ಬಂಟ್ವಾಳ: ನದಿಗೆ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಮೃತ್ಯು

Update: 2022-08-09 13:53 GMT
ರಕ್ಷಣ್ 

ಬಂಟ್ವಾಳ(Bantwal), ಆ.9: ನೇತ್ರಾವತಿ ನದಿ(Netravathi River)ಗೆ ಕಾಲು ಜಾರಿ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ಮಂಗಳವಾರ ನಡೆದಿದೆ.

ಬರಿಮಾರ್ ಗ್ರಾಮದ ಪಾಪೆತ್ತಿಮಾರು ನಿವಾಸಿ ರಕ್ಷಣ್ (16) ಮೃತ ವಿದ್ಯಾರ್ಥಿ. 

ಸ್ಥಳೀಯ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿಯಾದ ರಕ್ಷಣ್ ಕಾಲೇಜ್ ಗೆ ರಜೆ ಇದ್ದ ಹಿನ್ನೆಲೆಯಲ್ಲಿ ನೇತ್ರಾವತಿ ನದಿ ಬಳಿಗೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ. 

ನೀರಿಗೆ ಬಿದ್ದ ಸುದ್ದಿ ತಿಳಿದು ಸ್ಥಳೀಯರು ಮತ್ತು ಅಗ್ನಿ ಶಾಮಕದಳವರು ವಿದ್ಯಾರ್ಥಿಯನ್ನು ಮೇಲಕ್ಕೆತ್ತಿದ್ದು ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ಆಂಬ್ಯುಲೆನ್ಸ್ ನಲ್ಲಿ ಕಲ್ಲಡ್ಕ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ತುಂಬೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 

ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News