ಸ್ಮಶಾನಕ್ಕೆ ಮೀಸಲಿಟ್ಟ ಜಾಗದಲ್ಲಿ ಬಡಾವಣೆ ನಿರ್ಮಾಣ; ಕಾನೂನು ರೀತಿ ನಿರ್ಣಯ ಕೈಗೊಳ್ಳುವಂತೆ ಡಿಸಿಗೆ ಹೈಕೋರ್ಟ್ ನಿರ್ದೇಶ

Update: 2022-08-09 15:54 GMT

ಬೆಂಗಳೂರು, ಆ.9: ಯಲಹಂಕ ವ್ಯಾಪ್ತಿಯ ಗಂಟಿಗಾನಹಳ್ಳಿಯಲ್ಲಿ ಸ್ಮಶಾನಕ್ಕೆ ಮೀಸಲಿಟ್ಟಿರುವ ಜಾಗದಲ್ಲಿ ಬಡಾವಣೆ ನಿರ್ಮಾಣ ಮಾಡುವುದನ್ನು ಪ್ರಶ್ನಿಸಿ ಗ್ರಾಮಸ್ಥರು ಸಲ್ಲಿಸಿದ್ದ ಅರ್ಜಿಯನ್ನು ಕಾನೂನು ರೀತಿ ಪರಿಗಣಿಸಿ ನಿರ್ಣಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಹೈಕೋರ್ಟ್ ನಿರ್ದೇಶಿಸಿದೆ. 

ಬಡಾವಣೆ ನಿರ್ಮಾಣ ಆಕ್ಷೇಪಿಸಿ ಸ್ಥಳೀಯ ನಿವಾಸಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ನಿರ್ದೇಶನ ನೀಡಿದೆ. 

ಅರ್ಜಿದಾರರು ತಮ್ಮ ಅಹವಾಲುಗಳಿಗೆ ಸಂಬಂಧಿಸಿದಂತೆ ಮೂರು ವಾರದಲ್ಲಿ ಡಿಸಿಗೆ ಮನವಿ ಸಲ್ಲಿಸಬೇಕು. ಅದನ್ನು ಕಾನೂನು ಪ್ರಕಾರ ಪರಿಗಣಿಸಿ ತ್ವರಿತವಾಗಿ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News