ರಾಜ್ಯದಲ್ಲಿ ಮಂಗಳವಾರ 1,608 ಮಂದಿಗೆ ಕೊರೋನ ದೃಢ, ಇಬ್ಬರು ಮೃತ್ಯು

Update: 2022-08-09 17:41 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.9: ರಾಜ್ಯದಲ್ಲಿ ಮಂಗಳವಾರ 1,608 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಇಬ್ಬರು ಮೃತಪಟ್ಟಿದ್ದು, 2,068 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 40,22,714ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,123ಕ್ಕೆ ತಲುಪಿದೆ.  ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 10,790ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ. 

ಇಬ್ಬರು ಸಾವು: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ದಕ್ಷಿಣಕನ್ನಡ 1, ಉತ್ತರಕನ್ನಡ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.  

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 1,608 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 18, ಬಳ್ಳಾರಿ 69, ಬೆಳಗಾವಿ 26, ಬೆಂಗಳೂರು ಗ್ರಾಮಾಂತರ 6, ಬೆಂಗಳೂರುನಗರ 1098, ಬೀದರ್ 4, ಚಾಮರಾಜನಗರ 27, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 13, ಚಿತ್ರದುರ್ಗ 6, ದಕ್ಷಿಣಕನ್ನಡ 5, ದಾವಣಗೆರೆ 37, ಧಾರವಾಡ 40, ಗದಗ 6, ಹಾಸನ 24, ಹಾವೇರಿ 4, ಕಲಬುರಗಿ 6, ಕೊಡಗು 25, ಕೋಲಾರ 6, ಕೊಪ್ಪಳ 19, ಮಂಡ್ಯ 15, ಮೈಸೂರು 41, ರಾಯಚೂರು 10, ರಾಮನಗರ 1, ಶಿವಮೊಗ್ಗ 43, ತುಮಕೂರು 28, ಉಡುಪಿ 4, ಉತ್ತರಕನ್ನಡ 9, ವಿಜಯಪುರ 9, ಯಾದಗಿರಿ ಜಿಲ್ಲೆಯಲ್ಲಿ 3 ಪ್ರಕರಣ ಪತ್ತೆಯಾಗಿವೆ. 
 
ರಾಜಧಾನಿಯಲ್ಲಿ 1,098 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಮಂಗಳವಾರದಂದು 1,098  ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 1,534 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 18,46,564   ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,978 ಜನರು ಸೋಂಕಿಗೆ ಬಲಿಯಾಗಿದ್ದಾರೆ. 

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News