ಮಡಿಕೇರಿ; ದಂಪತಿಯ ನಡುವೆ ಕಲಹ; ಮಹಿಳೆಯ ಕೊಲೆ

Update: 2022-08-10 08:17 GMT
ಆರೋಪಿ ಬಟ್ಟೀರ ಗೋಪಾಲ

ಮಡಿಕೇರಿ, ಆ.10: ದಂಪತಿಯ ನಡುವಿನ ಕಲಹವು ಪತ್ನಿಯ ಸಾವಿನಲ್ಲಿ ಅಂತ್ಯವಾದ ಘಟನೆ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಚೇರಳ ಶ್ರೀಮಂಗಲ ಗ್ರಾಮದಲ್ಲಿ ನಡೆದಿದೆ.

ಬಟ್ಟೀರ ಷಷ್ಮ (44) ಎಂಬವರು ಗುಂಡೇಟಿನಿಂದ ಮೃತಪಟ್ಟಿದ್ದು, ಪತಿ ಬಟ್ಟೀರ ಗೋಪಾಲ (ಕಿಶನ್) ಗುಂಡು ಹಾರಿಸಿರುವುದಾಗಿ ಆರೋಪಿಸಲಾಗಿದೆ.

ಮಡಿಕೇರಿ ಗ್ರಾಮಾಂತರ ಪೊಲೀಸರು ಆರೋಪಿ ಗೋಪಾಲನನ್ನು ವಶಕ್ಕೆ ಪಡೆದಿದ್ದಾರೆ. ಮಂಗಳವಾರ ರಾತ್ರಿ ಇಬ್ಬರ ನಡುವೆ ಕಲಹ ಏರ್ಪಟ್ಟು ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಭೇಟಿ ನೀಡಿ ಪರಿಶೀಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News