ಮೂಡುಬಿದಿರೆ; ಜಾನುವಾರು ಅಕ್ರಮ ಸಾಗಾಟ: ಆರೋಪಿ ಸಂದೇಶ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

Update: 2022-08-10 12:39 GMT

ಮೂಡುಬಿದಿರೆ: ಜಾನುವಾರುಗಳನ್ನು ಅಕ್ರಮವಾಗಿ ಪಿಕ್ ಅಪ್ ವಾಹನದಲ್ಲಿ ಸಾಗಿಸುತ್ತಿದ್ದ ಆರೋಪದಲ್ಲಿ ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪುರಸಭೆ ವ್ಯಾಪ್ತಿಯ ಲಾಡಿಯ ಸಂದೇಶ ಶೆಟ್ಟಿ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ ಮೂಡುಬಿದಿರೆ ಕಡೆಯಿಂದ ತೋಡಾರು ಕಡೆಗೆ ಜಾನುವಾರು ಗಳನ್ನು ಅಕ್ರಮವಾಗಿ ಪಿಕ್‌ಅಪ್ ವಾಹನದಲ್ಲಿ ಸಾಗಿಸುತ್ತಿದ್ದು, ವಿದ್ಯಾಗಿರಿ ಚೆಕ್ ಪೋಸ್ಟ್ ಬಳಿ ಪರಿಶೀಲನೆ ನಡೆಸುವ ಸಂದರ್ಭ ಪತ್ತೆ ಹಚ್ಚಲಾಗಿದೆ. ಪಿಕ್‌ಅಪ್ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದು,  ಸಂದೇಶ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News