ಉದ್ಯಾವರ; ಟ್ಯಾಂಕರ್ ಢಿಕ್ಕಿ: ಸ್ಕೂಟರ್‌ ಸವಾರ ಸ್ಥಳದಲ್ಲೇ ಮೃತ್ಯು

Update: 2022-08-10 17:41 GMT

ಕಾಪು, ಆ.10: ಟ್ಯಾಂಕರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಉದ್ಯಾವರ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ರಾತ್ರಿ ವೇಳೆ ನಡೆದಿದೆ.

ಮೃತರನ್ನು ಮಲ್ಲಾರು ಗ್ರಾಮದ ಕೊಪ್ಪಲಂಗಡಿ ಕೋಟೆ ರಸ್ತೆಯ ನಿವಾಸಿ ಜಾಫರ್ ಎಂಬವರ ಮಗ ಅಲ್ಫಾಝ್(21) ಎಂದು ಗುರುತಿಸಲಾಗಿದೆ. ಸಹಸವಾರ ಸಾಹಿಲ್ ಸಣ್ಣಪುಟ್ಟ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

ಇವರಿಬ್ಬರು ಸ್ಕೂಟರ್‌ನಲ್ಲಿ ಕಾಪು ಕಡೆಯಿಂದ ಉಡುಪಿ ಕಡೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಟ್ಯಾಂಕರ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಇವರಿಬ್ಬರು ಬೈಕ್ ಸಮೇತ ಸವಾರರು ರಸ್ತೆಗೆ ಬಿದ್ದರೆನ್ನಲಾಗಿದೆ.

ಈ ವೇಳೆ ಅಲ್ಫಾಝ್ ತಲೆಯ ಮೇಲೆ ಟ್ಯಾಂಕರ್‌ನ ಚಕ್ರ ಚಲಿಸಿತು ಎನ್ನ ಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸವಾರ ಸ್ಥಳದಲ್ಲಿಯೇ ಮೃತಪಟ್ಟರೆಂದು ತಿಳಿದುಬಂದಿದೆ. ಹಿಂಬದಿ ಸವಾರ ಸಣ್ಣಪುಟ್ಟ ಗಾಯಗೊಂಡಿರುವ ಬಗ್ಗೆ ತಿಳಿದುಬಂದಿದೆ. ಅಪಘಾತ ನಡೆಸಿದ ಟ್ಯಾಂಕರ್‌ನ  ಚಾಲಕ, ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ ಎಂದು ದೂರಲಾಗಿದೆ.

ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News