ರಾಜ್ಯದಲ್ಲಿ ಬುಧವಾರ 1,680 ಮಂದಿಗೆ ಕೊರೋನ ದೃಢ, ಐವರು ಮೃತ್ಯು

Update: 2022-08-10 15:42 GMT

ಬೆಂಗಳೂರು, ಆ.10: ರಾಜ್ಯದಲ್ಲಿ ಬುಧವಾರ 1,680 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಐವರು ಮೃತಪಟ್ಟಿದ್ದು, 2,114 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 40,24,394ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,128ಕ್ಕೆ ತಲುಪಿದೆ.        
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 10,351ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.  

ಐವರ ಸಾವು: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಐವರು ಮೃತಪಟ್ಟಿದ್ದು, ಚಿಕ್ಕಬಳ್ಳಾಪುರ 1, ದಕ್ಷಿಣಕನ್ನಡ 1, ರಾಯಚೂರು 2, ಉತ್ತರಕನ್ನಡ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.  

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 1,680 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 30, ಬಳ್ಳಾರಿ 42, ಬೆಳಗಾವಿ 43, ಬೆಂಗಳೂರು ಗ್ರಾಮಾಂತರ 8, ಬೆಂಗಳೂರುನಗರ 1058, ಬೀದರ್ 5, ಚಾಮರಾಜನಗರ 14, ಚಿಕ್ಕಬಳ್ಳಾಪುರ 14, ಚಿತ್ರದುರ್ಗ 2, ದಕ್ಷಿಣಕನ್ನಡ 17, ದಾವಣಗೆರೆ 11, ಧಾರವಾಡ 39, ಹಾಸನ 65, ಹಾವೇರಿ 15, ಕಲಬುರಗಿ 33, ಕೊಡಗು 12, ಕೋಲಾರ 29, ಕೊಪ್ಪಳ 20, ಮಂಡ್ಯ 43, ಮೈಸೂರು 54, ರಾಯಚೂರು 32, ರಾಮನಗರ 14, ಶಿವಮೊಗ್ಗ 33, ತುಮಕೂರು 17, ಉಡುಪಿ 3, ಉತ್ತರಕನ್ನಡ 22, ವಿಜಯಪುರ 4, ಯಾದಗಿರಿ  ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ. 

ರಾಜಧಾನಿಯಲ್ಲಿ 1,058 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಬುಧವಾರದಂದು 1,058 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 1,342 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 18,47,622 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,978 ಜನರು ಸೋಂಕಿಗೆ ಬಲಿಯಾಗಿದ್ದಾರೆ. 
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News