ಮುಖ್ಯಮಂತ್ರಿ ರೇಸ್‍ನಲ್ಲಿ ನಾನಿಲ್ಲ: ಸಚಿವ ಎಸ್.ಟಿ.ಸೋಮಶೇಖರ್

Update: 2022-08-10 18:16 GMT

ಮೈಸೂರು,ಆ.10: 'ಮುಖ್ಯಮಂತ್ರಿ ರೇಸ್‍ನಲ್ಲಿ ನಾನಿಲ್ಲ, ಹೇಗೋ ಸಹಕಾರ ಸಚಿವನಾಗಿದ್ದೇನೆ ಅದು ಬೇಡ ಎಂದರೆ ಬಿಟ್ಟು ಬಿಡುತ್ತೇನೆ' ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. 

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ ಮುಖ್ಯಮಂತ್ರಿ ರೇಸ್‍ನಲ್ಲಿ ನೀವಿದ್ದೀರ ಎಂಬ ಪ್ರಶ್ನೆಗೆ 'ನಾನು ಮುಖ್ಯಮಂತ್ರಿ ರೇಸ್‍ನಲ್ಲಿ ಇಲ್ಲ, ಹೇಗೋ ಸಹಕಾರ ಸಚಿವ ನಾಗಿದ್ದೇನೆ. ಅದು ಇಷ್ಟ ಇಲ್ಲ ಎಂದರೆ ಬಿಟ್ಟು ಬಿಡುತ್ತೇನೆ ' ಎಂದು ಕೈ ಮುಗಿದು ಹೇಳಿದರು.

'ಕಾಂಗ್ರೆಸ್ ಕೃಪಾ ಪೋಷಿತ ನಾಟಕ ಮಂಡಳಿ, ಕಾಂಗ್ರೆಸ್‍ನಲ್ಲಿ ಒಳ ಬೇಗುದಿ ಆರಂಭವಾಗಿದೆ. ಶಮನ ಮಾಡಿಕೊಳ್ಳಲು ಬಿಜೆಪಿ ಮೇಲೆ ಬಾಣ ಪ್ರಯೋಗಿಸಿದ್ದಾರೆ. ಅವರು ಇವರ ಮೇಲೆ ಇವರು ಅವರ ಮೇಲೆ ಆಪಾದನೆ ಮಾಡುತ್ತಿದ್ದಾರೆ. ಆಪಾದನೆ ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದ್ದಾರೆ' ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News