ಕೊಪ್ಪಳ: ಹುಲಿಹೈದರ್ ಗ್ರಾಮದಲ್ಲಿ ಗುಂಪುಗಳ ನಡುವೆ ಘರ್ಷಣೆ; ಇಬ್ಬರು ಮೃತ್ಯು

Update: 2022-08-11 14:39 GMT
ಸಾಂದರ್ಭಿಕ ಚಿತ್ರ

ಕೊಪ್ಪಳ, ಆ.11 : ಕನಕಗಿರಿ ತಾಲೂಕಿನ ಹುಲಿ ಹೈದರ್ ಗ್ರಾಮದಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. 

ಮೃತರನ್ನು ಯಂಕಪ್ಪ ತಳವಾರ (60) ಹಾಗೂ ವಲಿ ಭಾಷಾ (22) ಎಂದು ಗುರುತಿಸಲಾಗಿದೆ.

ಘರ್ಷಣೆಯಲ್ಲಿ 6 ಮಂದಿಗೆ ಗಾಯಗಳಾಗಿದ್ದು, ಘರ್ಷಣೆಯ ಕಾರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಕನಕಗಿರಿ ಠಾಣೆಯ ಪೊಲೀಸರು ಮತ್ತು ಉಪ ವಿಭಾಗದ ಡಿವೈಎಸ್‌ಪಿ ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಗ್ರಾಮದಲ್ಲಿ ಸಿಆರ್​ಪಿಸಿ 144ನೇ ವಿಧಿಯ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ

ಇಲ್ಲಯವರೆಗೂ ಪೊಲೀಸರು ಈ ಸಂಬಂಧವಾಗಿ ಯಾರನ್ನೂ ಬಂಧಿಸಿಲ್ಲ ಎಂದು ತಿಳಿದು ಬಂದಿದೆ. 

ಗಾಯಾಳುಗಳನ್ನು ಗಂಗಾವತಿಯ ಉಪವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಕೊಪ್ಪಳದ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News