ಮಂಗಳೂರು; ವಿದೇಶಿ ಹಣ ಅಕ್ರಮ ಸಾಗಾಟ ಆರೋಪ; ಓರ್ವ ಸೆರೆ

Update: 2022-08-11 15:53 GMT

ಬಜ್ಪೆ: ಅಕ್ರಮವಾಗಿ ವಿದೇಶಿ ಹಣ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಓರ್ವನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತನನ್ನು ಭಟ್ಕಳ ಮೂಲದ ನಿವಾಸಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತ ಸ್ಪೈಸ್ ಜೆಟ್ ವಿಮಾನದ ಮೂಲಕ ಸುಮಾರು 5.97 ಲಕ್ಷ ರೂ. ಮೌಲ್ಯದ ಕರೆನ್ಸಿಯನ್ನು ಸಾಗಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಆರೋಪಿಯು ಕೈಚೀಲವೊಂದರಲ್ಲಿ ವಿದೇಶಿ ಹಣವನ್ನು ಬಚ್ಚಿಟ್ಟು ಸಾಗಿಸುತ್ತಿದ್ದ ವೇಳೆ ವಿಮಾನ ನಿಲ್ದಾಣದ ಏರ್ ಇಂಟೆಲಿಜೆನ್ಸ್ ಘಟಕದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News