VIDEO- ಚಿಕ್ಕಮಗಳೂರು : ವರ್ಗಾವಣೆಗೊಂಡ ಎಸ್ಪಿಗೆ ಹೂಮಳೆಗೈದು ಬೀಳ್ಕೊಟ್ಟ ಸಿಬ್ಬಂದಿ

Update: 2022-08-11 16:39 GMT

ಚಿಕ್ಕಮಗಳೂರು, ಆ.11: ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿ ವರ್ಗಾವಣೆಗೊಂಡಿರುವ ಎಂ.ಎಚ್.ಅಕ್ಷಯ್ ಅವರಿಗೆ ಸಿಬ್ಬಂದಿ ಗುರುವಾರ ಹೂಮಳೆಗೈದು ಬೀಳ್ಕೊಡಿಗೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಚ್.ಅಕ್ಷಯ್ ಅವರನ್ನು ವರ್ಗಾವಣೆಗೊಳಿಸಿ ಚಿಕ್ಕಮಗಳೂರು ಜಿಲ್ಲೆಯ ನೂತನ ಎಸ್ಪಿಯನ್ನಾಗಿ ಉಮಾಪ್ರಶಾಂತ್ ಅವರನ್ನು ರಾಜ್ಯ ಸರಕಾರ ನೇಮಿಸಿದ್ದು, ನಿರ್ಗಮಿತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಚ್.ಅಕ್ಷಯ್ ಅವರಿಗೆ ಪೊಲೀಸ್ ಸಿಬ್ಬಂದಿ ರಾಮನ ಹಳ್ಳಿಯಲ್ಲಿರುವ ಡಿಎಆರ್ ಮೈದಾನದಲ್ಲಿ ಗುರುವಾರ ಬೀಳ್ಕೋಡಿಗೆ ಸಮಾರಂಭವನ್ನು ಏರ್ಪಡಿಸಿದ್ದರು.

ಸಮಾರಂಭಕ್ಕೆ ತೆರೆದ ವಾಹನದಲ್ಲಿ ಆಗಮಿಸಿದ ನಿರ್ಗಮಿತಿ ಪೊಲೀಸ್ ಅಧಿಕಾರಿಯನ್ನು ಸಹ ಸಿಬ್ಬಂದಿ ಅದ್ಧೂರಿ ಸ್ವಾಗತ ಕೋರಿದರು. ಈ ವೇಳೆ ಸಿಬ್ಬಂದಿ ಹೂಮಳೆ ಸುರಿಸಿ ಅಭಿಮಾನ ಮೆರೆದರು. ಸಹ ಸಿಬ್ಬಂದಿಯ ಈ ಕಾರ್ಯದಿಂದ ನಿರ್ಗಮಿತ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಚ್.ಅಕ್ಷಯ್ ಭಾವುಕರಾದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News