ಭಾರತ ಸೇವಾದಳದ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ

Update: 2022-08-11 17:21 GMT

ಮಂಗಳೂರು, ಆ.11: ಭಾರತ ಸೇವಾದಳದ ದ.ಕ.ಜಿಲ್ಲಾಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಎಸ್.ಬಿ. ಜಯರಾಮ್ ರೈ ಮತ್ತು ಇತರ ಪದಾಧಿಕಾರಿಗಳಿಗೆ ಹಾಗೂ ವಿವಿಧ ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳಿಗೆ ಅಭಿನಂದನ ಕಾರ್ಯಕ್ರಮ ಗುರುವಾರ ದ.ಕ. ಜಿಲ್ಲಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.

ಕೇಂದ್ರ ಸಮಿತಿ ಸದಸ್ಯ ಹಾಗೂ ನಿಕಟಪೂರ್ವ ಜಿಲ್ಲಾಧ್ಯಕ್ಷ ಬಶೀರ್ ಬೈಕಂಪಾಡಿ, ಸೇವಾದಳದ ಉಪಾಧ್ಯಕ್ಷ ಸುಧಾಕರ್ ರೈ, ಖಜಾಂಚಿ ಸದಾಶಿವ ಭಟ್ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಟಿ.ಕೆ. ಸುಧೀರ್ ಸ್ವಾಗತಿಸಿದರು. ರಾಘವೇಂದ್ರ ರಾವ್ ವಂದಿಸಿದರು. ಮುಖ್ಯ ಸಂಘಟಕ ಮಂಜೇಗೌಡ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News